Friday, October 16, 2009

ಏಕೆನ್ನ ಈ ರಾಜ್ಯಕ್ಕೆಳೆತಂದೆ ಹರಿಯೇ

ರಾಗ: ತೋಡಿ ತಾಳ: ದೀಪ್ ಚಂಡಿತಾಳ

ಏಕೆನ್ನ ಈ ರಾಜ್ಯಕ್ಕೆಳೆತಂದೆ ಹರಿಯೇ
ಸಾಕಲಾರದೆ ಎನ್ನ ಏಕೆ ಪುಟ್ಟಿಸಿದೆ |

ಎನ್ನ ಕುಲದವರಿಲ್ಲ ಎನಗೊಬ್ಬ ಹಿತರಿಲ್ಲ
ಮನ್ನಿಸುವ ದೊರೆಯಿಲ್ಲ ಮನಕೆ ಹಿತವಿಲ್ಲ
ಹೊನ್ನುಚಿನ್ನಗಳಿಲ್ಲ ಒಲಿಸಿಕೊಂಬುವರಿಲ್ಲ
ಇನ್ನಿಲ್ಲಿ ತರವಲ್ಲ ಇಂದಿರೇಶನೆ ಬಲ್ಲ

ದೇಶ ಪರಿಚಯವಿಲ್ಲ ದೇಹದೊಳು ಬಲವಿಲ್ಲ
ವಾಸಿಪಂಥಗಳೆಂಬೊ ಒಲುಮೆ ಎನಗಿಲ್ಲ
ಬೇಸರ ಕಳೆವರಿಲ್ಲ ಬೇರೆ ಹಿತಜನರಿಲ್ಲ
ವಾಸುದೇವನೆ ಬಲ್ಲ ಈ ರಾಜ್ಯವೆಲ್ಲ

ಕರೆದು ಕೊಡುವವರಿಲ್ಲ ಕರುಣೆ ತೋರುವವರಿಲ್ಲ
ಕಮಲಾಕ್ಷನಲ್ಲದೆ ಗತಿಯೊಬ್ಬರಿಲ್ಲ
ಕನಸಲಿ ಕಳುವಿಲ್ಲ ಮನಸಲಿ ಧೃಢವಿಲ್ಲ
ವನಜಾಕ್ಷ ಪುರಂದರವಿಠಲ ತಾ ಬಲ್ಲ

No comments:

Post a Comment