ರಾಗ: ತೋಡಿ ತಾಳ: ದೀಪ್ ಚಂಡಿತಾಳ
ಏಕೆನ್ನ ಈ ರಾಜ್ಯಕ್ಕೆಳೆತಂದೆ ಹರಿಯೇ
ಸಾಕಲಾರದೆ ಎನ್ನ ಏಕೆ ಪುಟ್ಟಿಸಿದೆ |
ಎನ್ನ ಕುಲದವರಿಲ್ಲ ಎನಗೊಬ್ಬ ಹಿತರಿಲ್ಲ
ಮನ್ನಿಸುವ ದೊರೆಯಿಲ್ಲ ಮನಕೆ ಹಿತವಿಲ್ಲ
ಹೊನ್ನುಚಿನ್ನಗಳಿಲ್ಲ ಒಲಿಸಿಕೊಂಬುವರಿಲ್ಲ
ಇನ್ನಿಲ್ಲಿ ತರವಲ್ಲ ಇಂದಿರೇಶನೆ ಬಲ್ಲ
ದೇಶ ಪರಿಚಯವಿಲ್ಲ ದೇಹದೊಳು ಬಲವಿಲ್ಲ
ವಾಸಿಪಂಥಗಳೆಂಬೊ ಒಲುಮೆ ಎನಗಿಲ್ಲ
ಬೇಸರ ಕಳೆವರಿಲ್ಲ ಬೇರೆ ಹಿತಜನರಿಲ್ಲ
ವಾಸುದೇವನೆ ಬಲ್ಲ ಈ ರಾಜ್ಯವೆಲ್ಲ
ಕರೆದು ಕೊಡುವವರಿಲ್ಲ ಕರುಣೆ ತೋರುವವರಿಲ್ಲ
ಕಮಲಾಕ್ಷನಲ್ಲದೆ ಗತಿಯೊಬ್ಬರಿಲ್ಲ
ಕನಸಲಿ ಕಳುವಿಲ್ಲ ಮನಸಲಿ ಧೃಢವಿಲ್ಲ
ವನಜಾಕ್ಷ ಪುರಂದರವಿಠಲ ತಾ ಬಲ್ಲ
No comments:
Post a Comment